ಕೆಎಸ್ಒಯು ಪರೀಕ್ಷೆ ಮುಂದೂಡಿಕೆ
ಬೆಂಗಳೂರು, ಆ.15: ರಾಜ್ಯದದಲ್ಲಿ ಉಂಟಾಗಿರುವ ಜಲಪ್ರಳಯದಿಂದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಆ.19ರಂಧು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಬಿಎ ಹಾಗೂ ಬಿಕಾಂಗೆ ಆ.19ರಿಂದ ಪ್ರಾರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದಿನ 10 ದಿನಗಳ ಕಾಲ ಮುಂದೂಡಲಾಗಿದ್ದು, ಆಗಸ್ಟ್ 29ರಂದು ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ರಂಗಸ್ವಾಮಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಹಾ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಾಜ್ಯದ ಸುಮಾರು 17ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಮುಂದಿನ ದಿನಗಳಲ್ಲಿಯೂ ಮಳೆ ಬರುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story