ಜನರ ಮೆಚ್ಚುಗೆಗೆ ಪಾತ್ರವಾದ 500 ಅಡಿ ಉದ್ದದ ತಿರಂಗ ಮೆರವಣಿಗೆ
ಮಂಡ್ಯ, ಆ.15: 73ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮಂಡ್ಯ ಯೂತ್ ಗ್ರೂಪ್ ವತಿಯಿಂದ ಆಯೋಜಿಸಿದ್ದ 500 ಅಡಿ ಉದ್ದದ ತಿರಂಗ ಮೆರವಣಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತಲ್ಲದೆ ಭಾವೈಕ್ಯತೆಯ ಸಂದೇಶ ಸಾರಿತು.
ನಗರದ ಆಸ್ಪತ್ರೆ ರಸ್ತೆಯಲ್ಲಿರುವ ನಿರಾಳ ಕ್ಲಿನಿಕ್ ಬಳಿಯಿಂದ ಆರಂಭಗೊಂಡ ತ್ರಿವರ್ಣ ಧ್ವಜದ ಮೆರವಣಿಗೆ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ವೃತ್ತ ಹಾದು ನೂರಡಿ ರಸ್ತೆಯಲ್ಲಿ ಅಂತ್ಯಗೊಂಡಿತು.
ಮೆರವಣಿಗೆಯುದ್ದಕ್ಕೂ ರಸ್ತೆಯ ಅಕ್ಕಪಕ್ಕ ನಿಂತ ನೂರಾರು ಜನರು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಜನರು ಸ್ವಲ್ಪ ಕಾಲ ನಿಂತು ಮೆಚ್ಚುಗೆ ವ್ಯಕ್ತಪಡಿಸಿದರು. ಮಂಡ್ಯ ಯೂತ್ ಗ್ರೂಪ್ ಅಧ್ಯಕ್ಷ ಡಾ.ಅನಿಲ್ ಆನಂದ್, ಡಾ.ಯಾಶಿಕಾ, ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Next Story