ಉಮೇಶ ಜಾಧವ್ ಸಹೋದರನ ಭಾಷಣಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ
ಕಲಬುರಗಿ, ಆ.16: ಸಂಸದ ಉಮೇಶ ಜಾಧವ್ ಸಹೋದರ ರಾಮಚಂದ್ರ ಜಾಧವ್ ಯಾವುದೇ ಚುನಾಯಿತ ಹುದ್ದೆಯಲ್ಲಿ ಇಲ್ಲದಿದ್ದರೂ ಕಾಳಗಿಯಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಸ್ವಾತಂತ್ರ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡಿರುವುದನ್ನು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆಕ್ಷೇಪಿಸಿದ್ದಾರೆ.
ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಮಚಂದ್ರ ಜಾಧವ್ ಹೆಸರು ಇರಲಿಲ್ಲ. ಶಿಷ್ಟಾಚಾರದ ಪ್ರಕಾರ ಅವರನ್ನು ವೇದಿಕೆಗೆ ಕರೆಯುವಂತೆಯೂ ಇರಲಿಲ್ಲ. ಆದರೂ ಅವರು ವೇದಿಕೆಯಲ್ಲಿ ಮಾತನಾಡಲು ಅವಕಾಶ ನೀಡಿರುವುದು ಸರಿಯಲ್ಲವೆಂದು ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಯಂ ಘೋಷಿತ ರಾಷ್ಟ್ರೀಯತಾವಾದಿ ಎನಿಸಿಕೊಂಡವರು ಜಿಲ್ಲಾ ಕೇಂದ್ರಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ವಿಫಲರಾಗಿದ್ದಾರೆ ಎಂದು ಪ್ರಿಯಾಂಕ ಖರ್ಗೆ ಬಿಜೆಪಿ ಶಾಸಕರನ್ನು ಟೀಕಿಸಿದ್ದಾರೆ.
Next Story