ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತ್ಯು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು, ಆ.18: ಹಾಸ್ಟೆಲ್ ವಿದ್ಯಾರ್ಥಿಗಳ ಸಾವು ಪ್ರಕರಣ ಸಂಬಂಧ ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತಂತೆ ಸಂಬಂಧಪಟ್ಟ ತನಿಖೆಗೆ ಆದೇಶ ನೀಡಲಾಗಿದೆ. ಇಂತಹ ಘಟನೆ ನಡೆದಿರುವುದು ಅತ್ಯಂತ ವಿಷಾದನೀಯ ಎಂದು ಹೇಳಿದರು.
ತನಿಖೆ ನಡೆಸುವಂತೆ ಆಗ್ರಹ
ಕೊಪ್ಪಳದ ಹಾಸ್ಟೆಲ್ನಲ್ಲಿ ವಿದ್ಯುತ್ ತಂತಿ ತಗುಲಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಸುದ್ದಿ ಕೇಳಿ ಆಘಾತವಾಗಿದೆ. ಈ ಪ್ರಕರಣದ ಬಗ್ಗೆ ನಿಪ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಾರ್ಡನ್ ಬಂಧನ
ವಿದ್ಯಾರ್ಥಿಗಳ ಸಾವು ಪ್ರಕರಣ ಸಂಬಂಧ ಹಾಸ್ಟೆಲ್ ವಾರ್ಡನ್ ಬಸವರಾಜ್ ಎಂಬುವರನ್ನು ಕೊಪ್ಪಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದ್ದು, ಜೆಸ್ಕಾಂ ಅಧಿಕಾರಿ, ಕಟ್ಟಡ ಮಾಲಕನ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.
Next Story