ಕಂದಾಯ ಭವನ ಕುಸಿತ: ಗ್ರಾಮ ಲೆಕ್ಕಾಧಿಕಾರಿಗೆ ಗಾಯ
ದಾವಣಗೆರೆ, ಆ.20: ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿರುವ ಕಂದಾಯ ಭವನದಲ್ಲಿ ಕಚೇರಿ ಸೇವೆಯಲ್ಲಿದ್ದಾಗ ಭವನದ ಕೆಲ ಭಾಗ ಕುಸಿದು ಗ್ರಾಮ ಲೆಕ್ಕಾಧಿಕಾರಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಅಂಜುಂ (26) ಗಾಯಗೊಂಡ ಗ್ರಾಮ ಲೆಕ್ಕಾಧಿಕಾರಿ. ಅಂಜುಂ ಚನ್ನಗಿರಿ ತಾಲೂಕಿನ ಗೊಪ್ಪೆನಹಳ್ಳಿ ಗ್ರಾಮದ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಘಟನೆಯಿಂದ ಅವರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story