ಬಿಜೆಪಿ ಹೈಕಮಾಂಡ್ ಭೇಟಿ ಮಾಡುತ್ತೇವೆ: ಅನರ್ಹ ಶಾಸಕ ಎಚ್.ವಿಶ್ವನಾಥ್
ಬೆಂಗಳೂರು, ಆ.21: ಹೊಸದಿಲ್ಲಿಗೆ ತೆರಳುತ್ತಿದ್ದು ಬಿಜೆಪಿ ಹೈಕಮಾಂಡ್ ಭೇಟಿ ಮಾಡುತ್ತೇವೆ. ಜೊತೆಗೆ ಯಾರು ಯಾರು ಸಿಗುತ್ತಾರೋ ಅವರನ್ನೆಲ್ಲ ಭೇಟಿ ಮಾಡುತ್ತೇವೆ ಎಂದು ಅನರ್ಹ ಜೆಡಿಎಸ್ ಶಾಸಕ ಎಚ್.ವಿಶ್ವನಾಥ್ ತಿಳಿಸಿದರು.
ಬುಧವಾರ ನಗರದ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗ ಮಂತ್ರಿ ಮಾಡಲು ಆಗುವುದಿಲ್ಲ ಎಂದರು.
ಯಾರನ್ನು ಮಂತ್ರಿ ಮಾಡಬೇಕು ಅನ್ನೋದು ಮುಖ್ಯಮಂತ್ರಿಯ ಸುಪ್ರೀಂ ಪವರ್. ರಾಜಕೀಯ ಲೆಕ್ಕಾಚಾರ ರೀತಿ ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ. ಅದನ್ನೆಲ್ಲ ನಾವು ಪ್ರಶ್ನೆ ಮಾಡಲು ಆಗುವುದಿಲ್ಲ. ನಮ್ಮನ್ನು ಮುಖ್ಯಮಂತ್ರಿ ಎಲ್ಲಿಯೂ ಕಡೆಗಣನೆ ಮಾಡಿಲ್ಲ ಎಂದು ವಿಶ್ವನಾಥ್ ಹೇಳಿದರು.
Next Story