ವಸತಿ ಶಾಲೆ ವಿದ್ಯಾರ್ಥಿನಿ ನಿಗೂಢ ಸಾವು
ತನಿಖೆಗೆ ಶಾಸಕ ಸಿ.ಎಸ್.ಪುಟ್ಟರಾಜು ಆಗ್ರಹ
ಪಾಂಡವಪುರ, ಆ.23: ತಾಲೂಕಿನ ಕೆರೆತೊಣ್ಣೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಕೆ.ಆರ್.ಪೇಟೆ ತಾಲೂಕು ಆಲೇನಹಳ್ಳಿ ಗೋಪಾಲ್ ಪದ್ಮ ದಂಪತಿ ಪುತ್ರಿ ರಕ್ಷಿತ ಮೃತದೇಹ ಸ್ನಾನದ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ಷಿತ ಮೃತದೇಹ ಶವಪರೀಕ್ಷೆ ನಡೆಯಿತು. ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಸಿ.ಎಸ್.ಪುಟ್ಟರಾಜು ಪ್ರಕರಣದ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದರು.
ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ, ತಹಶೀಲ್ದಾರ್ ಪ್ರಮೋದ್ ಎಲ್.ಪಾಟೀಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಸ್ಥಳಕ್ಕೆ ಭೇಟಿ ನೀಡಿದ್ದರು.
Next Story