ಡಿಕೆಶಿ ಬಂಧನಕ್ಕೆ ರಾಜ್ಯಾದ್ಯಂತ ಆಕ್ರೋಶ: ಬಸ್ ಗೆ ಬೆಂಕಿ, ಕಲ್ಲು ತೂರಾಟ
ಬೆಂಗಳೂರು, ಸೆ.3: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಲವೆಡೆ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿ ಅಭಿಮಾನಿಗಳು ಶಿವಕುಮಾರ್ ಬಂಧನವನ್ನು ಖಂಡಿಸಿದ್ದಾರೆ. ಅಲ್ಲದೇ, ರಾಮನಗರದಲ್ಲಿ ಬಸ್ ಗೆ ಬೆಂಕಿ ಹಚ್ಚಿದ್ದಾರೆ.
ರಾಮನಗರ, ಚೆನ್ನಪಟ್ಟಣದಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ ನಡೆಸಿ ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲವಳ್ಳಿ 1, ಚನ್ನಪಟ್ಟಣ 1, ಕನಕಪುರದಲ್ಲಿ 2 ಬಸ್ ಗಳಿಗೆ ಕಲ್ಲು ತೂರಾಟ ನಡೆದಿದೆ. ಅಲ್ಲದೇ, ಟಯರ್ ಗಳಿಗೆ ಬೆಂಕಿ ಹಚ್ಚಿರುವ ಪ್ರತಿಭಟನಾಕರರು ಕನಕನಪುರ ಬಂದ್ ಗೆ ಕರೆ ನೀಡಿದ್ದಾರೆ. ಹಲವಡೆ ಬಿಜೆಪಿ ನಾಯಕರ ಫೋಟೋಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Next Story