ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಅನ್ನೋದೇ ರಾಜಕೀಯ: ಗೃಹಸಚಿವ ಬಸವರಾಜ್ ಬೊಮ್ಮಾಯಿ
ಹುಬ್ಬಳ್ಳಿ, ಸೆ.5: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನ ಪ್ರಕರಣ ರಾಜಕೀಯ ಪ್ರೇರಿತ ಅನ್ನೋದೇ ರಾಜಕೀಯ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಡಿಕೆಶಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಂಡಿದೆ. ಇದರಲ್ಲಿ ನಮಗೆ ಖುಷಿ, ಸಂತೋಷದ ಪ್ರಶ್ನೆಯೇ ಇಲ್ಲ, ಕಾನೂನು ಕಾಪಡಬೇಕಲ್ವಾ? ಇದನ್ನು ರಾಜಕೀಯ ಪ್ರೇರಿತ ಅನ್ನೊದೇ ರಾಜಕೀಯ ಎಂದವರು ನುಡಿದರು.
ಡಿಕೆಶಿ ಬಂಧನದ ಬೆನ್ನಲ್ಲೇ ಮೊನ್ನೆ ರಾತ್ರಿಯಿಂದ ಅಹಿತಕರ ಘಟನೆಗಳು ನಡೆದಿವೆ. ರಾಜ್ಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ರಾಮನಗರ ,ಕನಕಪುರ ಪರಿಸ್ಥಿತಿ ಹತೋಟಿಗೆ ಬಂದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಸಾರ್ವಜನಿಕ ಆಸ್ತಿ ನಷ್ಟ ಉಂಟು ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದವರು ತಿಳಿಸಿದರು.
Next Story