ಡಿ.ಕೆ.ಶಿವಕುಮಾರ್ ಜೊತೆ ನಾವಿದ್ದೇವೆ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
ಬೆಂಗಳೂರು, ಸೆ. 5: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಈ ಸಂದರ್ಭದಲ್ಲಿ ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದಿಲ್ಲಿ ಧೈರ್ಯ ತುಂಬಿದ್ದಾರೆ.
ಗುರುವಾರ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಕರೆ ಮಾಡಿ ಶಿವಕುಮಾರ್ ಬಗ್ಗೆ ಸೋನಿಯಾ ಗಾಂಧಿ ವಿಚಾರಿಸಿದರು. ಶಿವಕುಮಾರ್ ಅವರ ಆರೋಗ್ಯ ಹೇಗಿದೆ, ಅವರ ಮಾನಸಿಕ ಸ್ಥಿತಿ ಹೇಗಿದೆ ಎಂದು ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಲಾಗಿದೆ.
ಸುಮಾರು ಮೂರು ನಿಮಿಷಗಳ ಕಾಲ ಸುರೇಶ್ ಅವರೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ ‘ಬಿಜೆಪಿ ವಿಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲಿ ನಾವೆಲ್ಲರೂ ಅವರ ಜತೆಗಿದ್ದೇವೆ’ ಎಂದು ಸುರೇಶ್ಗೆ ತಿಳಿಸಿದ್ದಾರೆ.
Next Story