ಸಕಲೇಶಪುರ: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಕಾರು
ಸಕಲೇಶಪುರ, ಸೆ.8: ಹಾಸನದ ವ್ಯಕ್ತಿಯೋರ್ವರು ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಕಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ತಾಲೂಕಿನ ಹೆಗ್ಗದ್ದೆ ಗ್ರಾಮದ ಬಳಿ ಇಂದು ಸಂಜೆ ನಡೆದಿದೆ.
ಹಾಸನದ ಮನು ಎಂಬವರು ಕುಟುಂಬದೊಂದಿಗೆ ತನ್ನ ಐಕಾನ್ ಕಾರಿನಲ್ಲಿ ಮಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಸಂಜೆ 6 ಗಂಟೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಾಹನ ಬಿಸಿಯಾಗಿ ನಿಂತಾಗ ಪರೀಕ್ಷಿಸಲು ಕಾರಿನಿಂದ ಇಳಿದ ಸಂದರ್ಭದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
ವಾಹನದಲ್ಲಿದ್ದ ಮನು ಹಾಗೂ ಅವರ ಪತ್ನಿ ಮಕ್ಕಳು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆಸಿದ್ದು, ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
Next Story