ಗೋಕಾಕ್ನಲ್ಲಿ 'ಅಂಬಿರಾವ್ ಪಾಟೀಲ್ ದರ್ಬಾರ್': ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದ ಸತೀಶ್ ಜಾರಕಿಹೊಳಿ
ಬೆಂಗಳೂರು, ಸೆ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳ ಸಭೆ ಕರೆದು, ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ ತಮ್ಮ ಅಳಿಯ ಅಂಬಿರಾವ್ ಪಾಟೀಲ್ ಒಪ್ಪಿಗೆ ಪಡೆದು ನಿರ್ಣಯ ತೆಗೆದುಕೊಳ್ಳುವಂತೆ ಸೂಚಿಸಿರುವುದು ಖಂಡನೀಯ. ಒಂದು ವೇಳೆ ಅಧಿಕಾರಿಗಳು ಕಾನೂನು ಬಾಹಿರವಾಗಿ ನಡೆದುಕೊಂಡರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಾನೂನು ಬದ್ಧವಾಗಿ ಮತ್ತು ಸಾರ್ವಜನಿಕವಾಗಿ ನಡೆದುಕೊಳ್ಳುವುದು ಸರಕಾರಿ ಅಧಿಕಾರಿಗಳ ಕರ್ತವ್ಯವಾಗಿದೆ. ಒಂದು ವೇಳೆ ಅಧಿಕಾರಿಗಳು ಕಾನೂನು ಬಾಹಿರವಾಗಿ ನಡೆದುಕೊಂಡರೆ, ನಾವು ಮತ್ತು ಸಾರ್ವಜನಿಕರು ಉಗ್ರವಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದಯಷ್ಟೇ ಅಂಬಿರಾವ್ ಪಾಟೀಲ್ ವಿರುದ್ದ ಗುಡುಗಿದ್ದ ಸತೀಶ್ ಜಾರಕಿಹೊಳಿ, ಗೋಕಾಕ್ನಲ್ಲಿ ಬರುವ ಉಪಚುನಾವಣೆಯಲ್ಲಿ ಅಂಬಿರಾವ್ ಪಾಟೀಲ್ ಸಾಮ್ರಾಜ್ಯ ಪ್ರವಾಹದಂತೆ ಕೊಚ್ಚಿ ಹೋಗಲಿದೆ. ಅಂಬಿರಾವ್ ಅಂದಾ ದರ್ಬಾರ್ಗೆ ಕಡಿವಾಣ ಹಾಕುತ್ತೇವೆ ಎಂದು ವಾಗ್ದಾಳಿ ನಡೆಸಿದ್ದರು.