ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಷ್ಟಸಾಧ್ಯ: ಸಚಿವ ಆರ್.ಅಶೋಕ್
ಬೆಂಗಳೂರು, ಸೆ. 14: ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಾಧ್ಯವಾಗುತ್ತದೆಯೋ ಇಲ್ಲವೋ ಎಂದು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಶನಿವಾರ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಕಾರಣದಿಂದಾಗಿ ಈ ಬಾರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಕಷ್ಟಸಾಧ್ಯ. ಆದರೆ, ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದರು.
ಚಳಿಗಾಲದಲ್ಲೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕೋ ಅಥವಾ ಬೇರೆ ಯಾವಾಗ ಅಧಿವೇಶನ ನಡೆಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪರ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದ ಅವರು, ನೆರೆ ಸ್ಥಿತಿ ಹಿನ್ನೆಲೆಯಲ್ಲಿ ಅಧಿವೇಶನಕ್ಕೆ ಸಿದ್ಧತೆ ಕೈಗೊಳ್ಳಲು ಕಷ್ಟಸಾಧ್ಯವಾಗಲಿದೆ ಎಂದರು.
Next Story