ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಇದೆಯೇ?: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, ಸೆ. 16: ‘ರಾಜ್ಯದಲ್ಲಿರುವ ಸರಕಾರಕ್ಕೆ ಕಣ್ಣು, ಕಿವಿ, ಹೃದಯ ಇದೆಯೇ?’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಶ್ನಿಸಿದ್ದಾರೆ.
‘ಪ್ರವಾಹ ಉಂಟಾಗಿ 45 ದಿನ ಆಗಿದೆ. ಆದರೆ, ಇದುವರೆಗೂ ನಯಾಪೈಸೆ ನೆರವನ್ನು ಕೇಂದ್ರ ನೀಡಿಲ್ಲ. ರಾಜ್ಯ ಸರಕಾರ 38 ಸಾವಿರ ಕೋಟಿ ರೂ.ನೆರವು ಬೇಕೆಂದು ಮನವಿ ಮಾಡಿತ್ತು. ಆದರೆ ಕೇಂದ್ರ, ನೀವು ಹೆಚ್ಚಿನ ಹಣವನ್ನು ಕೇಳಿದ್ದೀರಿ, ಇದಕ್ಕೆ ಸ್ಪಷ್ಟನೆ ಕೊಡಿ ಎಂದು ಆ ಮನವಿ ವಾಪಸ್ ಕಳುಹಿಸಿದೆ. ಜನರ ಜೀವನದ ಜೊತೆ ಹೀಗೆ ಚೆಲ್ಲಾಟ ಆಡುವುದು ಸರಿಯಲ್ಲ’ ಎಂದು ಟ್ವಿಟ್ಟರ್ ಮೂಲಕ ಆಕ್ಷೇಪಿಸಿದ್ದಾರೆ.
‘ಬಿಜೆಪಿ ನಾಯಕರು ಪುಕ್ಕಲರು, ಒಬ್ಬರಿಗೂ ಧೈರ್ಯವಿಲ್ಲ. ಹೀಗಾಗಿ ಅವರು ಹೈಕಮಾಂಡನ್ನು ಪ್ರಶ್ನಿಸುವುದೇ ಇಲ್ಲ. ನಾನು ಕಂಡಂತೆ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರೆ ಅದು ಯಡಿಯೂರಪ್ಪ. ಮಂಡ್ಯ ಜಿಲ್ಲೆಯವರಾದರೂ ಈ ಮಣ್ಣಿನ ಸ್ವಾಭಿಮಾನ-ಗಡಸುತನ ಅವರಲ್ಲಿ ಇಲ್ಲ’ ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
Next Story