45 ದಿನಗಳು ಕಳೆದರೂ ಕೇಂದ್ರ ಸರಕಾರ ಬಿಡಿಗಾಸು ನೀಡಿಲ್ಲ: ಕಾಂಗ್ರೆಸ್ ಆಕ್ರೋಶ
ರಾಜ್ಯದಲ್ಲಿ ಭೀಕರ ಪ್ರವಾಹ
ಬೆಂಗಳೂರು, ಸೆ. 16: ರಾಜ್ಯದಲ್ಲಿ ಭೀಕರ ಪ್ರವಾಹ ಉಂಟಾಗಿ ನಲವತ್ತೈದು ದಿನಗಳು ಕಳೆದರೂ ಕೇಂದ್ರ ಸರಕಾರ ಈವರೆಗೂ ಬಿಡಿಗಾಸು ನೀಡಿಲ್ಲ ಎಂದು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ನಾಲ್ಕೈದು ದಿನಗಳಲ್ಲಿ ಪರಿಹಾರ ಬರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳುತ್ತಿದ್ದರೂ, ಇದುವರೆಗೂ ಪರಿಹಾರ ಸಿಕ್ಕಿಲ್ಲ. ಪ್ರವಾಹ ಪೀಡಿತರ ಸಂಕಷ್ಟಕ್ಕೆ ರಾಜ್ಯ ಸರಕಾರವೂ ಸ್ಪಂದಿಸುತ್ತಿಲ್ಲ. ಹೀಗಾಗಿ ಸಂತ್ರಸ್ತರು ಸಮಸ್ಯೆ ಎದುರಿಸುವಂತಾಗಿದೆ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಧಾನಿ ಮೋದಿ ನೇತೃತ್ವದ ಸರಕಾರ ಜನಾದೇಶವನ್ನು ಅತ್ಯಂತ ಅಪಾಯಕಾರಿಯಾಗಿ ಬಳಸಿಕೊಳ್ಳುತ್ತಿದೆ. ಆ ಮೂಲಕ ಕಾಂಗ್ರೆಸ್ ಪಕ್ಷದ ತಾಳ್ಮೆ ಪರೀಕ್ಷಿಸುತ್ತಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹೋರಾಟಕ್ಕೆ ಮುಂದಾಗಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಕರೆ ನೀಡಿದೆ.
Next Story