ರಾಜೀವ್ ಯುವ ಪ್ರತಿಷ್ಠಾನದ ಅಧ್ಯಕ್ಷರಾಗಿ ಟಿ.ಎಂ.ಶಹಿದ್ ತೆಕ್ಕಿಲ್
ಬೆಂಗಳೂರು, ಸೆ.16: ರಾಜೀವ್ ಯುವ ಪ್ರತಿಷ್ಠಾನ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಟಿ.ಎಂ.ಶಹಿದ್ ತೆಕ್ಕಿಲ್ ಅವರನ್ನು ರಾಜೀವ್ ಯುವ ಪ್ರತಿಷ್ಠಾನದ ರಾಷ್ಟ್ರೀಯ ಅಧ್ಯಕ್ಷರಾದ ಆರ್.ಪರಾಂಬನ್ ನೇಮಕ ಮಾಡಿದ್ದಾರೆ.
ಟಿ.ಎಂ.ಶಹಿದ್ ತೆಕ್ಕಿಲ್ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಯೂನಿಯನ್ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ರಾಜ್ಯ ವಕ್ಫ್ ಕೌನ್ಸಿಲ್ನ ಸದಸ್ಯ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.
Next Story