ಜೀವನದಲ್ಲಿ ಜಿಗುಪ್ಸೆ: ಯುವಕ ಆತ್ಮಹತ್ಯೆ
ಮಂಡ್ಯ, ಸೆ.16: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮೊತ್ತಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಂತ್ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೂ ಮೊದಲು ತಂದೆಗೆ ಪತ್ರ ಬರೆದು ಕ್ಷಮೆ ಕೋರಿದ್ದಾನೆ. ಜತೆಗೆ ಸಹೋದರ ನಿಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಾನೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾನೆ.
ನನ್ನ ಸಾವಿಗೆ ಯಾರೂ ಕಾರಣರಲ್ಲ. ಆದರೆ, ನಾನು ಯಾರಿಗೂ ಕೆಟ್ಟದ್ದು ಮಾಡಿಲ್ಲ. ಎಲ್ಲರೂ ಮೋಸ ಮಾಡುತ್ತಿದ್ದಾರೆ. ಬದುಕಲು ಇಲ್ಲವಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ ಪತ್ರದಲ್ಲಿ ಬರೆದುಕೊಂಡಿದ್ದಾನೆ.
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story