ಚಿತ್ರದುರ್ಗ: ಮಾನವ ರಹಿತ ಜೆಟ್ ವಿಮಾನ ಪತನ
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸಮೀಪದ ಬಾಳೇನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಮಾನವ ರಹಿತ ಜೆಟ್ ವಿಮಾನವೊಂದು ಮಂಗಳವಾರ ಬೆಳಗ್ಗೆ ಪತನಗೊಂಡಿದೆ.
ರೈತರೊಬ್ಬರ ಅಡಿಕೆ ತೋಟದಲ್ಲಿ ಇಂದು ಬೆಳಗ್ಗೆ ಜೆಟ್ ವಿಮಾನ ಪತನಗೊಂಡಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.