ಆಪರೇಷನ್ ಕಮಲದ ಸಂತ್ರಸ್ತರ ಬಚಾವ್ ಮಾಡಲು ಸಿಎಂ ದಿಲ್ಲಿಗೆ: ಮಾಜಿ ಸಿಎಂ ಎಚ್ ಡಿಕೆ ಆರೋಪ
ಬೆಂಗಳೂರು, ಸೆ. 22: ‘ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ರಾಜಕೀಯ ನಾಟಕ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
‘ಅಮಿತ್ ಶಾರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೆ ಬಿಎಸ್ವೈ ದಿಲ್ಲಿಗೆ ಹೋಗಿದ್ದಾರೆ’ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಟೀಕಿಸಿದ್ದಾರೆ.
ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು 'ರಾಜಕೀಯ ನಾಟಕ'. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ BSY ದೆಹಲಿಗೆ ಹೋಗಿದ್ದಾರೆ.
— H D Kumaraswamy (@hd_kumaraswamy) September 22, 2019
Next Story