ಅಸ್ವಸ್ಥ ಮಹಿಳೆಯನ್ನು ತನ್ನ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ಸಚಿವ ಶ್ರೀರಾಮಲು
ಹನೂರು, ಸೆ.25: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಮಹಿಳೆಯೊಬ್ಬರು ತೀವ್ರ ಅಸ್ವಸ್ಥಗೊಂಡು, ಮನೆಯ ಅಂಗಳದ ಬಳಿ ನರಳಾಡುತ್ತಿದ್ದುದನ್ನು ಕಂಡ ಆರೋಗ್ಯ ಸಚಿವ ಶ್ರೀರಾಮಲು ಅವರು ಮಹಿಳೆಯನ್ನು ತಮ್ಮ ವಾಹನದಲ್ಲಿ ಮಲೆಮಹದೇಶ್ವರ ಬೆಟ್ಟದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.
ಬಳಿಕ ಬೆಟ್ಟದಲ್ಲಿ ಮಾದಪ್ಪನ ದರ್ಶನ ಪಡೆದು ವಾಪಸಾಗುವ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಕ್ರಮ: ಹನೂರು ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಸಾರ್ವಜನಿಕರು ಸಚಿವ ಶ್ರೀರಾಮಲು ಅವರ ಬಳಿ ಮನವಿ ಮಾಡಿದರು. ಇದಕ್ಕೆ ಸ್ಪಂಸಿದಿ ಸಚಿವರು ಶೀಘ್ರದಲ್ಲಿಯೇ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
Next Story