ದಿಲ್ಲಿ ಹೈಕೋರ್ಟ್ ಮೊರೆ ಹೋದ ಡಿಕೆಶಿ: ಇಂದೇ ಜಾಮೀನು ಅರ್ಜಿ ವಿಚಾರಣೆ
ಹೊಸದಿಲ್ಲಿ, ಸೆ.26: ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಜಾಮೀನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ದಿಲ್ಲಿ ಹೈಕೋರ್ಟ್ ಮೊರೆಹೋಗಿದ್ದಾರೆ.
ದಿಲ್ಲಿ ಹೈಕೋರ್ಟ್ ಗೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ಇಂದೇ ನಡೆಯಲಿದೆ.
ಸದ್ಯ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದು, ಅವರನ್ನು ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಹಾಗೂ ಮಾಜಿ ಸಚಿವ ಆನಂದಶರ್ಮಾ ಭೇಟಿ ಮಾಡಿದರು. ಭೇಟಿ ವೇಳೆ ಸಂಸದ ಡಿ.ಕೆ.ಸುರೇಶ್ ಕೂಡಾ ಹಾಜರಿದ್ದರು.
Next Story