ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಮಕ್ಕಳು ನೀರುಪಾಲು
ಕೋಲಾರ, ಅ.2: ಕೆರೆಯ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ತಾಲೂಕಿನ ಕ್ಯಾಲನೂರು ಗ್ರಾಮದ ಚಿಕ್ಕಕೆರೆಯಲ್ಲಿ ನಡೆದಿದೆ.
ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗಗನ್ (7) ನಿಖಿಲ್ (8) ಮೃತ ಮಕ್ಕಳು ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ ನಂತರ ಮಕ್ಕಳು ಕೆರೆಗೆ ಈಜಲು ಹೋಗಿದ್ದು, ಈ ಸಂದರ್ಭ ಕೆರೆಯ ಹೂಳಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story