ಶಿವಮೊಗ್ಗ: ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿ ಮೃತ್ಯು
ಸಾಂದರ್ಭಿಕ ಚಿತ್ರ
ಶಿವಮೊಗ್ಗ,ಅ. 9: ಜಿಲ್ಲೆಯ ಶಿಕಾರಿಪುರ ತಾಲೂಕಿನ ಗಾಮ ಹಳ್ಳಿಯಲ್ಲಿ ಕುಮದ್ವತಿ ನದಿಯಲ್ಲಿ ಈಜಲು ತೆರಳಿದ ಪಿಯುಸಿ ವಿದ್ಯಾರ್ಥಿಯೋರ್ವ ಮುಳುಗಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಶಿಕಾರಿಪುರದ ವಿನಾಯಕ ಪಟ್ಟಣದ ನಿವಾಸಿ ಶಶಾಂಕ್ (17) ಮೃತಪಟ್ಟ ಅಪ್ರಾಪ್ತ ಯುವಕ ಎಂದು ಗುರುತಿಸಲಾಗಿದೆ. ಈತ ಚನ್ನಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಸ್ಥಳೀಯರ ನೆರವಿನೊಂದಿಗೆ ಮೃತದೇಹವನ್ನು ನೀರಿನಿಂದ ಮೇಲೆಕ್ಕೆತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story