ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ. ಹಸ್ತಾಂತರ
ಬೆಂಗಳೂರು, ಅ. 13: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ 1 ಕೋಟಿ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಈ ಸಂದರ್ಭ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಡಿ. ಆನಂದ, ವ್ಯವಸ್ಥಾಪಕ ನಿರ್ದೇಶಕ ಲೋಹಿತೇಶ್ವರ ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ 60 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಮಂಜುನಾಥ್ ಗೌಡ, ಉಪಾಧ್ಯಕ್ಷ ಚನ್ನವೀರಪ್ಪ ಹಾಗೂ ನಿರ್ದೇಶಕರಾದ ಸುಧೀರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story