ಗುಂಡ್ಲುಪೇಟೆ : ಕಾರು - ಬೈಕ್ ನಡುವೆ ಅಪಘಾತ; ದಂಪತಿ ಬಲಿ
ಗುಂಡ್ಲುಪೇಟೆ: ರಸ್ತೆ ಅಪಘಾತಕ್ಕೆ ದಂಪತಿ ಮೃತಪಟ್ಟ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಗರಗನಹಳ್ಳಿ ಗೇಟ್ ಹತ್ತಿರ ಸೋಮವಾರ ಬೆಳಗ್ಗೆ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗುಂಡ್ಲುಪೇಟೆ ತಾಲ್ಲೂಕಿನ ರಾಘವಪುರ ಗ್ರಾಮದ ಪಾಪಣ್ಣ (50) ಮತ್ತು ಅವರ ಪತ್ನಿ ಪುಟ್ಟಸಿದ್ದಮ್ಮ(45) ಮೃತರು ಎಂದು ಗುರುತಿಸಲಾಗಿದೆ. ರಾಘವಾಪುರದಿಂದ ಗರಗನಹಳ್ಳಿ ಗ್ರಾಮಕ್ಕೆ ತೆರಳುವಾಗ ಗರಗನಹಳ್ಳಿ ಗೇಟ್ ಹತ್ತಿರ ಈ ಅಪಘಾತ ಸಂಭವಿಸಿದೆ.
ಬೇಗೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story