ದಾವಣಗೆರೆ: ಯುವಕನ ಕೊಲೆ ಪ್ರಕರಣ- ಆರೋಪಿಗಳ ಬಂಧನ
ದಾವಣಗೆರೆ, ಅ.16: ಇತ್ತೀಚೆಗೆ ದೊಡ್ಡಬಾತಿ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗರಾಜ, ರಮೇಶ, ಮಾರುತಿ, ರಾಘವೇಂದ್ರ ಬಂಧಿತ ಆರೋಪಿಗಳು.
ಅ.14 ರಂದು ದೊಡ್ಡಬಾತಿ ಗ್ರಾಮದ ಹರೀಶನನ್ನು ಹರಿಹರ ನಗರದ ಭಾರತ್ ಆಯಿಲ್ ಮಿಲ್ ಕಾಂಪೌಂಡ್ ಹತ್ತಿರ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ನಡೆಸಿದ ಹರಿಹರ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಅನೈತಿಕ ಸಂಬಂಧ ಶಂಕೆಯಿಂದ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.
ಪ್ರಕರಣದ ತನಿಖೆಯಲ್ಲಿ ಯಶಸ್ವಿಯಾದ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.
Next Story