ಹನೂರು: ವಿಷ ಸೇವಿಸಿ ರೈತ ಆತ್ಮಹತ್ಯೆ
ಹನೂರು, ಅ.13: ವಿಷ ಸೇವಿಸಿ ರೈತರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹನೂರು ಪಟ್ಟಣದಲ್ಲಿ ನಡೆದಿದೆ.
ನಾಗರಾಜುನಾಯ್ಡು (67) ಮೃತ ರೈತ.
ಜೀವನದಲ್ಲಿ ಜಿಗುಪ್ಸೆಗೊಂಡ ಜಮೀನಿನಲ್ಲಿ ವಿಷ ಸೇವಿಸಿದ್ದು, ವಿಷಯ ತಿಳಿದ ಸ್ಥಳೀಯರು ಅವರನ್ನು ಸಮೀಪದ ಕಾಮಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ.
ಈ ಸಂಬಂಧ ಹನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದ ಶಾಸಕ ಆರ್.ನರೇಂದ್ರ ಹನೂರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Next Story