ಭಟ್ಟಂಗಿಗಳಿಗೆ ನೀಡಿದ ಸಮಾಧಾನಕರ ಬಹುಮಾನದಂತಿದೆ: ಅಕಾಡೆಮಿಗಳ ನೇಮಕಾತಿ ಬಗ್ಗೆ ಕಾಂಗ್ರೆಸ್ ಟೀಕೆ
ಬೆಂಗಳೂರು, ಅ.18: ರಾಜ್ಯ ಸರಕಾರದ ಅಕಾಡೆಮಿಗಳ ನೇಮಕಾತಿ ನೋಡಿದರೆ ಬಹುತೇಕರ ಆಯ್ಕೆಯು ಭಟ್ಟಂಗಿಗಳಿಗೆ ನೀಡಿದ ಸಮಾಧಾನಕರ ಬಹುಮಾನ ದಂತಿದೆ. ಸಾಮಾಜಿಕ ನಾಯ್ಯ, ಭೌಗೋಳಿಕೆ ನ್ಯಾಯ ಪಾಲಿಸಲಾಗಿಲ್ಲ. ನೇಮಕಕ್ಕೆ ಸಂಘ ಪರಿವಾರದ ಹಿನ್ನೆಲೆಯನ್ನು ಮಾತ್ರ ಪರಿಗಣಿಸಿದಂತಿದ್ದು, ಜ್ಞಾನ, ಅನುಭವ, ಕ್ಷಮತೆ, ಕೌಶಲ್ಯತೆ ಹಾಗೂ ಹಿರಿತನವನ್ನು ಕಡೆಗಣಿಸಿದಂತಿದೆ. ಸಿರಿಗನ್ನಡಂ ಗೆಲ್ಗೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಟೀಕಿಸಿದೆ.
Next Story