ಅ.21ರಂದು ಸನ್ನಡತೆ ಆಧಾರದಲ್ಲಿ 141 ಜೀವಾವಧಿ ಕೈದಿಗಳ ಬಿಡುಗಡೆ
ಬೆಂಗಳೂರು, ಅ.19: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿನ ಒಟ್ಟು 141 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆಯ ಆಧಾರದ ಮೇಲೆ ನಾಳೆ(ಅ.21) ಬಿಡುಗಡೆ ಮಾಡಲಿದ್ದು, ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಹಲವು ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ.
ರಾಷ್ಟ್ರಪತಿಗಳ ಪದಕ ಮತ್ತು ಮುಖ್ಯಮಂತ್ರಿಗಳ ಪದಕ ಪ್ರದಾನ ಕಾರ್ಯಕ್ರಮ, ಬೆಂಗಳೂರು ರೇಡಿಯೋ ಪ್ರಸಾರಕ್ಕೆ ಚಾಲನೆ, ನೂತನ ಸಭಾಂಗಣ ಉದ್ಘಾಟನೆ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಸಹ ನಡೆಯಲಿವೆ.
ವಿವಿಧ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಲಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್, ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆ ಪ್ರಕಟನೆಯಲ್ಲಿ ತಿಳಿಸಿದೆ.
Next Story