ದೇಶಭಕ್ತಿಯ ಬಗ್ಗೆ ಮಾತನಾಡಲು ಕನ್ನಡ ಭಾಷೆಗೆ ಅರ್ಹತೆ ಇಲ್ಲವೇ?: ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು, ಅ.22: ನೆಹರು ಯುವ ಕೇಂದ್ರ ವತಿಯಿಂದ ಏರ್ಪಡಿಸಿರುವ ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ವಿಷಯದ ಬಗ್ಗೆ ಭಾಷಣ ಸ್ಪರ್ಧೆಯಲ್ಲಿ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾತ್ರ ಭಾಷಣ ಮಾಡುವ ಅವಕಾಶ ನೀಡಲಾಗಿದೆ. ಏಕೆ, ದೇಶಭಕ್ತಿಯ ಬಗ್ಗೆ ಮಾತನಾಡಲು ಕನ್ನಡ ಭಾಷೆಗೆ ಅರ್ಹತೆ ಇಲ್ಲವೇ? ಕನ್ನಡ ಬೆಳೆಸಬೇಕಾದ ರಾಜ್ಯ ಸರಕಾರವೇ ಕನ್ನಡವನ್ನು ಈ ರೀತಿ ಕಡೆಗಣಿಸಿದರೆ ಹೇಗೆ? ಎಂದು ಜೆಡಿಎಸ್ ಟ್ವೀಟರ್ನಲ್ಲಿ ಪ್ರಶ್ನಿಸಿದೆ.
Next Story