ನೆರೆ ಸಂತ್ರಸ್ತರಿಗೆ ಪುನರ್ವಸತಿ: ಸಿಎಂ ಪರಿಹಾರ ನಿಧಿಗೆ ಆರ್ಥಿಕ ಸಹಾಯಕ್ಕೆ ಮನವಿ
ಬೆಂಗಳೂರು, ಅ.23: ರಾಜ್ಯದಲ್ಲಿ ತಲೆದೋರಿರುವ ನೆರೆ ಹಾವಳಿಯಿಂದ ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡಿವೆ. ಅವರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಆರ್ಥಿಕ ಸಹಾಯ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಆರ್ಥಿಕ ಸಹಾಯ ಮಾಡುವವರು Chief Minister Relief fund Naturl Calamity, SBI, Vidhana Soudha Branch cmrf.karnataka.gov.in -web site) ಖಾತೆ ಸಂಖ್ಯೆ-37887098605ಕ್ಕೆ ಸಂದಾಯ ಮಾಡಬಹುದು.
ಚೆಕ್ ಹಾಗೂ ಡಿಸಿ ಕಳುಹಿಸುವವರು ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂ.01ಇಲ್ಲಿಗೆ ಕಳುಹಿಸಬಹುದಾಗಿದೆ. payTM, Google pay, Amazon pay, Phone pay ನಲ್ಲಿಯೂ ದೇಣಿಗೆ ನೀಡಲು ಅವಕಾಶವಿದೆ. ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 080ಜಿ(2)ರಡಿ ತೆರಿಗೆ ವಿನಾಯಿತಿ ಇದೆ. ತೆರಿಗೆ ವಿನಾಯಿತಿ ಪಡೆಯಲು pan no.AAAGC1692P ಅಥವಾ GGGGG 0000G ನ್ನು ಬಳಸಬುದು ಎಂದು ಪ್ರಕಟನೆಯಲ್ಲಿ ತಿಳಿಸಿದೆ.