ಹುಬ್ಬಳ್ಳಿ: ಸ್ಫೋಟ ಪ್ರಕರಣದ ಗಾಯಾಳು ಹುಸೇನಸಾಬ್ಗೆ ಉದ್ಯೋಗ- ಸುರೇಶ್ ಅಂಗಡಿ ಭರವಸೆ
ಹುಬ್ಬಳ್ಳಿ, ಅ.26: ಹುಬ್ಬಳ್ಳಿ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಗಂಭೀರವಾಗಿ ಗಾಯವಾಗಿರುವ ಹುಸೇನಸಾಬ್ ಅವರಿಗೆ ಭವಿಷ್ಯದ ದೃಷ್ಟಿಯಿಂದ ಉದ್ಯೋಗ ನೀಡುವ ಕುರಿತು ಹೊಸದಿಲ್ಲಿಯ ರೈಲ್ವೆ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭರವಸೆ ನೀಡಿದರು.
ಶನಿವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹುಸೇನಸಾಬ್ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಹುಸೇನಸಾಬ್ ಅವರ ಕೈಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದ್ದು, ಆರೋಗ್ಯ ಸುಧಾರಿಸುತ್ತಿದೆ. ಅನುಮಾನಾಸ್ಪದ ವಸ್ತುವನ್ನು ಪರೀಕ್ಷಿಸಲು ಮುಂದಾಗಿದ್ದು ಅವರ ತಪ್ಪು ಎಂದು ನುಡಿದರು.
ರೈಲ್ವೆ ಜಿಎಂ ಅವರ ಅಧಿಕಾರ ವ್ಯಾಪ್ತಿಯಿಂದ ಗಾಯಾಳುಗೆ 50 ಸಾವಿರ ಪರಿಹಾರ ನೀಡಲಾಗಿದೆ. ಅವರ ಭವಿಷ್ಯದ ದೃಷ್ಟಿಯಿಂದ ಉದ್ಯೋಗ ನೀಡುವ ಕುರಿತು ಹೊಸದಿಲ್ಲಿಯ ರೈಲ್ವೆ ಮಂಡಳಿಗೆ ಪತ್ರ ಬರೆಯಲಾಗುವುದು ಎಂದರು.
Next Story