ವಿಜಯಪುರ : ರಸ್ತೆ ಅಪಘಾತ ; ಬೈಕ್ ಸವಾರರಿಗೆ ಗಂಭೀರ ಗಾಯ
ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ಕಾರಣ ಆಕ್ರೋಶಗೊಂಡ ಸ್ಥಳೀಯರು
ವಿಜಯಪುರ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸವಾರರು ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಸಿಪಿಐ ಪೊಲೀಸ್ ಠಾಣೆ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.
ಗಾಯಾಳು ಬೈಕ್ ಸವಾರರನ್ನು ಸ್ಥಳೀಯರು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಇಲ್ಲದ ಕಾರಣ ಸ್ಥಳೀಯರು ಆಸ್ಪತ್ರೆಯಲ್ಲಿನ ವಸ್ತುಗಳ ಎಸೆದು ತಮ್ಮ ಆಕ್ರೋಶಗೊಂಡ ವ್ಯಕ್ತಪಡಿಸಿದ್ದು, ವೈದ್ಯರು ಕರ್ತವ್ಯದ ವೇಳೆ ಆಸ್ಪತ್ರೆಗೆ ಚಕರ್ ಹಾಕಿ ಮನೆಗೆ ಹೋಗಿರುವುದಾಗಿ ಆರೋಪಿಸಿದ್ದು, ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆಯ ನಿರ್ಲಕ್ಷ್ಯವನ್ನು ಗಮನಿಸಬೇಕಾಗಿ ಮನವಿ ಮಾಡಿದ್ದಾರೆ.
Next Story