ತುಮಕೂರು: ಬಸ್- ಲಾರಿ ನಡುವೆ ಅಪಘಾತ; ಮೂವರು ಮೃತ್ಯು
ತುಮಕೂರು, ನ.3: ಖಾಸಗಿ ಬಸ್ ಹಾಗೂ ಲಾರಿ ನಡುವೆ ಢಿಕ್ಕಿಯಾಗಿ ಬಸ್ಸಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶಿರಾ ರಾಷ್ಟ್ರೀಯ ಹೆದ್ದಾರಿಯ(48) ಊರುಕೆರೆ ಗ್ರಾಮದಲ್ಲಿ ನಡೆದಿದೆ.
ಸೋಪ್ ಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಲಾರಿ ತೆರಳುತ್ತಿತ್ತು. ಈ ವೇಳೆ ಖಾಸಗಿ ಬಸ್ ಢಿಕ್ಕಿಯಾದ ರಭಸಕ್ಕೆ ಲಾರಿ ಉರುಳಿಬಿದ್ದಿದೆ. ಇದರಿಂದ ರಸ್ತೆ ತುಂಬಾ ಸೋಪುಗಳು ಚೆಲ್ಲಿದ್ದವು. ಬಸ್ ನಲ್ಲಿದ್ದ ಮೂವರು ಮೃತರಾದರೆ, ಹಲವು ಮಂದಿ ಗಾಯಗೊಂಡಿದ್ದಾರೆ.
ಲಾರಿ ಚಾಲಕ ಮತ್ತು ಕ್ಲೀನರ್ ಗಂಭಿರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Next Story