ಟಿ.ಎನ್.ಶೇಷನ್ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ವೈ ಸಂತಾಪ
ಬೆಂಗಳೂರು, ನ. 11: ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೇಷನ್ ಅವರು ಭಾರತೀಯ ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಹೊಸ ಆಯಾಮ ನೀಡಿದ ದಿಟ್ಟ ವ್ಯಕ್ತಿ. ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅವರ ಕೊಡುಗೆ ಅವಿಸ್ಮರಣೀಯ ಎಂದು ಯಡಿಯೂರಪ್ಪ ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು-ವರ್ಗಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Next Story