ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ಘೋಷಣೆ
ಬೆಂಗಳೂರು, ನ. 14: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಡಿ.12ಕ್ಕೆ ಉಪಚುನಾವಣೆ ಘೋಷಣೆ ಮಾಡಿದೆ.
ನ.25ಕ್ಕೆ ಚುನಾವಣೆ ಅಧಿಸೂಚನೆ ಪ್ರಕಟಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಡಿ.2 ಅಂತಿಮ ದಿನ. ಡಿ.3ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಡಿ.5ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಡಿ.12ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ.
ಅದೇ ದಿನ ಸಂಜೆ 5ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪವನ್ ದಿವಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story