ಕೆಪಿಎಲ್ ಬೆಟ್ಟಿಂಗ್: ಬಳ್ಳಾರಿ ಟಸ್ಕರ್ಸ್ ಮಾಲಕನಿಗಾಗಿ ಲುಕ್ ಔಟ್ ನೋಟಿಸ್
ಬೆಂಗಳೂರು, ನ.15: ಕೆಪಿಎಲ್ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಬಳ್ಳಾರಿ ಟಸ್ಕರ್ಸ್ ಹಾಗೂ ದುಬೈ ಕ್ರಿಕೆಟ್ ತಂಡದ ಮಾಲಕ ಅರವಿಂದ್ ವೆಂಕಟೇಶ್ರೆಡ್ಡಿ ಪಾತ್ರವಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿರುವ ಹಿನ್ನೆಲೆ ಲುಕ್ ಔಟ್(ಎಲ್ಒಸಿ) ನೋಟಿಸ್ ಹೊರಡಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪ್ರಕರಣ ಬೆಳಕಿಗೆ ಬಂದ ನಂತರ, ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ತಂಡ ಅರವಿಂದ್ ವೆಂಕಟೇಶ್ ರೆಡ್ಡಿಗೆ ನೋಟಿಸ್ ನೀಡುವ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ, ವಿಚಾರಣೆಗೆ ಗೈರಾಗಿ, ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಬೆಳಗಾವಿ ಪ್ಯಾಂಥರ್ಸ್ ಮಾಲಕ ಅಶ್ರಫ್ ಅಲಿ ಸೇರಿದಂತೆ ನಾಲ್ವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ತನಿಖೆ ತೀವ್ರಗೊಳಿಸಿದ್ದಾರೆ.
Next Story