ಕಾರು ರಿವರ್ಸ್ ತೆಗೆಯುವ ವೇಳೆ ಢಿಕ್ಕಿ: ಆಟವಾಡುತ್ತಿದ್ದ 2 ವರ್ಷದ ಮಗು ಮೃತ್ಯು
ಚಾಮರಾಜನಗರ, ನ.16: ಕಾರು ರಿವರ್ಸ್ ತೆಗೆಯುವ ವೇಳೆ ಆಟವಾಡುತ್ತಿದ್ದ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಸತ್ತೇಗಾಲ ಹ್ಯಾಂಡ್ ಪೋಸ್ಟ್ನ ಚಿಕ್ಕದರ್ಗಾದ ಅಯಾಝ್ ಖಾನ್ ಪುತ್ರಿ ಸೆಹರೀನ್ ತಾಜ್ (2) ಮೖತ ಮಗು. ಚಿಕ್ಕದರ್ಗಾದ ಸಮೀಪದಲ್ಲಿ ಆಟವಾಡುತ್ತಿದ್ದ ವೇಳೆ ಬೆಂಗಳೂರಿನ ದಾಸರಹಳ್ಳಿ ನಿವಾಸಿ ಸೈಯದ್ ಅಬ್ದುಲ್ ಗನಿ ಎಂಬವರು ತನ್ನ ಡಸ್ಟರ್ ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಆಟವಾಡುತ್ತಿದ್ದ ಸೆಹರಿನ್ ತಾಜ್ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸೆಹರೀನ್ ತಾಜ್ ತೀವ್ರ ಗಾಯಗೊಂಡು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಮೃತ ಬಾಲಕಿಯ ತಂದೆ ಅಯಾಝ್ ಖಾನ್ ದೂರಿನ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಆರೋಪಿ ಸೈಯದ್ ಅಬ್ದುಲ್ನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
Next Story