ಉಪಚುನಾವಣೆ: ಬಿಜೆಪಿ ‘ಸ್ಟಾರ್ ಪ್ರಚಾರಕ’ರ ಪಟ್ಟಿಯಿಂದ ಎಸ್ಸೆಂ ಕೃಷ್ಣ, ಹೆಗಡೆ, ತೇಜಸ್ವಿ ಸೂರ್ಯ ಹೊರಕ್ಕೆ
ಬೆಂಗಳೂರು, ನ. 17: ಉಪಚುನಾವಣೆ ಪ್ರಚಾರಕ್ಕೆ ಬಿಜೆಪಿಯ ನಲ್ವತ್ತು ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೊದಲನೆ ಸ್ಥಾನದಲ್ಲಿದ್ದರೆ, ಸಿಎಂ ಯಡಿಯೂರಪ್ಪ ಎರಡನೆ ಸ್ಥಾನದಲ್ಲಿದ್ದಾರೆ.
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹಿರಿಯರಾದ ಎಸ್ಸೆಂ ಕೃಷ್ಣ, ವಿ.ಶ್ರೀನಿವಾಸ ಪ್ರಸಾದ್, ಸಂಸದರಾದ ಅನಂತ ಕುಮಾರ್ ಹೆಗಡೆ, ತೇಜಸ್ವಿ ಸೂರ್ಯ, ನಟ ಜಗ್ಗೇಶ್ ಸೇರಿದಂತೆ ಪ್ರಮುಖರಿಗೆ ಸ್ಥಾನ ನೀಡಿಲ್ಲ. ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಅನಂತ ಕುಮಾರ್ ಹೆಗಡೆ ಹೆಸರು ಈ ಬಾರಿ ಕೈಬಿಡಲಾಗಿದೆ ಎಂದು ಗೊತ್ತಾಗಿದೆ.
ಉಳಿದಂತೆ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಬಿ.ಎಲ್.ಸಂತೋಷ್, ಮುರುಳೀಧರ ರಾವ್, ಅರುಣ್ ಕುಮಾರ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಮತ್ತು ಗೋವಿಂದ ಕಾರಜೋಳ ಸೇರಿದಂತೆ ಸಚಿವರು, ಶಾಸಕರು ಹಾಗೂ ಮುಖಂಡರ ಹೆಸರುಗಳು ಪಟ್ಟಿಯಲ್ಲಿವೆ.
Next Story