ಶ್ರೀರಾಮುಲುಗೆ ಮಾನಮರ್ಯಾದೆ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ತೊರೆಯಬೇಕಿತ್ತು : ಸಿದ್ದರಾಮಯ್ಯ
ಮೈಸೂರು: ಸಚಿವ ಶ್ರೀರಾಮುಲುಗೆ ಮಾನಮರ್ಯಾದೆ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆಯಬೇಕಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ನೈತಿಕತೆ ಇಲ್ಲ, ಇವರಿಗೆ ಮಾನ ಮರ್ಯಾದೆ ಎಂಬುದಿದ್ದರೆ ಇಷ್ಟೊತ್ತಿಗೆ ಬಿಜೆಪಿಗೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು.
ಚುನಾವಣೆ ಪೂರ್ವದಲ್ಲಿ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡುತ್ತೇನೆ ಎಂದ ಬಿಜೆಪಿ ಮಾಡಿದ್ದಾರ ? ಇನ್ನು ಶ್ರೀರಾಮುಲು ಎಸ್ಟಿ ಗೆ 7% ಮೀಸಲಾತಿ ನೀಡಬೇಕು ಇಲ್ಲದಿದ್ದರೆ ಒಂದು ಕ್ಷಣವೂ ಬಿಜೆಪಿಯಲ್ಲಿರುವುದಿಲ್ಲ ಎಂದಿದ್ದರು ಅದನ್ನು ಮಾಡಿದ್ದಾರ ಎಂದು ಪ್ರಶ್ನಿಸಿದರು.
ನನ್ನ ಬಗ್ಗೆ ಮಾತನಾಡುವ ನೈತಿಕತೆ ಶ್ರೀರಾಮುಲು ಅವರಿಗೆ ಇಲ್ಲ, ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿ ಎಂದು ಹೇಳಿದರು.
Next Story