ರಸ್ತೆ ಅಪಘಾತ: ಪ್ರಜಾವಾಣಿ ವರದಿಗಾರ ಮೃತ್ಯು
ಮಂಜುನಾಥ್
ದಾವಣಗೆರೆ : ಕೊಡಗನೂರು ಕೆರೆಯ ಸಮೀಪ ಬುಧವಾರ ರಾತ್ರಿ ಟ್ರ್ಯಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪ್ರಜಾವಾಣಿಯ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಎಂ.ಸಿ. ಮಂಜುನಾಥ್ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೊಳಲ್ಕೆರೆಯಲ್ಲಿರುವ ಸಹೋದರಿಯ ಮನೆಗೆ ಹಾವೇರಿಯಿಂದ ಬೈಕ್ನಲ್ಲಿ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಢಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Next Story