ಹಿರೇಕೆರೂರು ಉಪಚುನಾವಣೆ: ಪಕ್ಷೇತರ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಘೋಷಣೆ
ಬೆಂಗಳೂರು, ನ. 23: ಹಿರೇಕೆರೂರು ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ ಅವರ ‘ಕಹಳೆ ಊದುತ್ತಿರುವ ವ್ಯಕ್ತಿ’ ಗುರುತಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಪಕ್ಷದ ಅಭ್ಯರ್ಥಿ ಶಿವಲಿಂಗ ಶಿವಾಚಾರ್ಯ ಸ್ವಾಮಿ ಬದಲಾದ ರಾಜಕೀಯ ಬೆಳವಣಿಗೆಗಳಿಂದ ಕೊನೆಯ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ಹೀಗಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿರವರಿಗೆ ಬೆಂಬಲ ನೀಡಲಿದೆ ಎಂದು ದೇವೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story