ಉಪಚುನಾವಣೆ ವಿಶೇಷಾಧಿಕಾರಿಯಾಗಿ ಮನೀಶ್ ಮೌದ್ಗಿಲ್ ನೇಮಕ
ಮಂಡ್ಯ, ನ.27: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಅವರನ್ನು ಎಸ್.ಎಸ್.ಟಿ, ಎಫ್.ಎಸ್.ಟಿ, ಅಬಕಾರಿ ಹಾಗೂ ಇತರೆ ದಿನಂಪ್ರತಿ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂಬಂಧ ಯಾವುದೇ ದೂರುಗಳು ಇದ್ದಲ್ಲಿ ಮೊ.:9900099111ಗೆ ಸಂಪರ್ಕಿಸಬಹುದಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ತಿಳಿಸಿದ್ದಾರೆ.
Next Story