ವಿಜಯಪುರ : ನಿಂತಿದ್ದ ಪಿಕಪ್ ಗೆ ಲಾರಿ ಢಿಕ್ಕಿ ; ಇಬ್ಬರು ಸ್ಥಳದಲ್ಲೇ ಮೃತ್ಯು
ವಿಜಯಪುರ : ರಸ್ತೆ ಬದಿ ನಿಂತಿದ್ದ ಮಹಿಂದ್ರಾ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೂಡಗಿ ಕ್ರಾಸ್ ಬಳಿ ನಡೆದಿದೆ.
ಮಧ್ಯಪ್ರದೇಶ ಮೂಲದ ಧೀರಜ್ ಗಾಳೆ (35), ನಝೀರ್ ತಳಪಿ (50) ಮೃತರು ಎಂದು ಗುರುತಿಸಲಾಗಿದೆ. ನಿಡಗುಂದಿ ಕಡೆಯಿಂದ ವಿಜಯಪುರ ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿಯಾದ ಪರಿಣಾಮ ಇಬ್ಬರು ಬಲಿಯಾಗಿದ್ದಾರೆ.
ಈ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story