ಹನೂರು: ರಸ್ತೆಯಲ್ಲೇ ಹರಿದ ಚರಂಡಿ ನೀರು; ಸಂಚಾರಕ್ಕೆ ಅಡಚಣೆ
ಹನೂರು, ಡಿ.1: ಭಾನುವಾರ ಸುರಿದ ಮಳೆಯಿಂದಾಗಿ ಚರಂಡಿ ನೀರು ರಸ್ತೆಯಲ್ಲೇ ಹರಿದು ಸಂಚಾರಕ್ಕೆ ಅಡಚಣೆಯಾಗಿರುವ ಘಟನೆ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂಜೆ ಸುಮಾರು 1 ಗಂಟೆಗಳ ಕಾಲ ಸುರಿದ ಮಳೆಗೆ ಕೊಳ್ಳೇಗಾಲ- ಮಲೆಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿರುವ ಹಳೆ ಚರಂಡಿಯ ನೀರು ರಸ್ತೆ ಮೇಲೆ ಹರಿದ ಪರಿಣಾಮ ಜನರು ಪರದಾಡುವಂತಾಯಿತು. ದುರ್ನಾತ ಬೀರುತ್ತಿದ್ದ ಚರಂಡಿ ನೀರಿನಿಂದಾಗಿ ಜನರು ಮೂಗು ಮುಚ್ಚಿಕೊಂಡು ಸಂಚರಿಸು ಸ್ಥಿತಿ ನಿರ್ಮಾಣವಾಗಿತ್ತು.
ಅಲ್ಲದೆ ರಾಮಾಪುರ ಮುಖ್ಯರಸ್ತೆಯಲ್ಲಿ ಚರಂಡಿ ನೀರು ನುಗ್ಗಿದ ಪರಿಣಾಮ 1 ಗಂಟೆಗೂ ಹೆಚ್ಚು ಸಮಯವನ್ನು ಅಂಗಡಿಗಳಲ್ಲಿಯೇ ಕಳೆಯುವಂತಾಯಿತು. ಚರಂಡಿ ನೀರು ರಸ್ತೆಗೆ ನುಗ್ಗಿದ್ದರಿಂದ ಕೌದಳ್ಳಿ ಗ್ರಾಮಕ್ಕೆ ಬಂದಿದ್ದ ನೂರಾರು ಜನ ತೀವ್ರ ತೊಂದರೆ ಅನುಭವಿಸಿದರು. ಚರಂಡಿ ನೀರು ನಿಂತ ಕಾರಣ ಸುಮಾರು ಹಲವು ತಾಸುಗಳ ಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು.
Next Story