ಕೆಪಿಎಲ್ ಬೆಟ್ಟಿಂಗ್ ನಲ್ಲಿ ಸಿನೆಮಾ ನಟ-ನಟಿಯರ ಕೈವಾಡ !
ಭಾಸ್ಕರ್ ರಾವ್
ಬೆಂಗಳೂರು, ಡಿ.4: ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಬೆಟ್ಟಿಂಗ್ ಪ್ರಕರಣ ಸಂಬಂಧ ಕೆಲ ನಟ-ನಟಿಯರ ಕೈವಾಡ ಇರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಶೀಘ್ರದಲ್ಲಿಯೇ ಅವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರಿಕೆಟ್ ಪಂದ್ಯಗಳ ಬಳಿಕ ನಡೆಯುವ ಕಾರ್ಯಕ್ರಮಗಳಲ್ಲಿ ಸಿನೆಮಾ ನಟ, ನಟಿಯರು ಪಾಲ್ಗೊಳ್ಳುತ್ತಿದ್ದರು. ಈ ಮೂಲಕ ಆಟಗಾರರು ಹಾಗೂ ಆಡಳಿತ ಮಂಡಳಿಯ ಜೊತೆ ಸಂಪರ್ಕವಿರುವ ಶಂಕೆ ಇದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದರು.
ಕೆಲ ಕಲಾವಿದರ ಆಸ್ತಿ ಮೌಲ್ಯ ಹೆಚ್ಚಾಗಿರುವ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದ ಅವರು, ಬೆಟ್ಟಿಂಗ್ ಪ್ರಕರಣದಲ್ಲಿ ಮತ್ತಷ್ಟು ತಪ್ಪಿತಸ್ಥರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ಇದ್ದಲ್ಲಿ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.
Next Story