Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜನರಿಗೆ ಮೋದಿಯಷ್ಟು ನಂಬಿಕೆ ದ್ರೋಹ...

ಜನರಿಗೆ ಮೋದಿಯಷ್ಟು ನಂಬಿಕೆ ದ್ರೋಹ ಮಾಡಿದವರು ಬೇರೆ ಯಾರೂ ಇಲ್ಲ: ಸಾಹಿತಿ ದೇವನೂರು ಮಹಾದೇವ

ವಾರ್ತಾಭಾರತಿವಾರ್ತಾಭಾರತಿ15 Dec 2019 10:47 PM IST
share
ಜನರಿಗೆ ಮೋದಿಯಷ್ಟು ನಂಬಿಕೆ ದ್ರೋಹ ಮಾಡಿದವರು ಬೇರೆ ಯಾರೂ ಇಲ್ಲ: ಸಾಹಿತಿ ದೇವನೂರು ಮಹಾದೇವ

ಮೈಸೂರು,ಡಿ.15: ಇತ್ತೀಚಿನ ದಿನಗಳಲ್ಲಿ ಜನರು ನರೇಂದ್ರ ಮೋದಿಯವರನ್ನು ನಂಬಿದಷ್ಟು ಬಹುಶಃ ಬೇರೆ ಯಾರನ್ನೂ ನಂಬಿಲ್ಲ. ಹಾಗೇನೆ ಮೋದಿಯವರಷ್ಟು ಜನರಿಗೆ ನಂಬಿಕೆ ದ್ರೋಹ ಮಾಡಿದವರೂ ಬೇರೆ ಯಾರೂ ಇಲ್ಲ ಅಂತಲೂ ಅನಿಸುತ್ತಿದೆ. ಈ ಮಾತನ್ನು ನೋವಿನಿಂದ ನುಡಿಯುತ್ತಿದ್ದೇನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ರವಿವಾರ ಪೌರತ್ವ ಕಾಯಿದೆ ಮತ್ತು ಎನ್‍ಆರ್‍ಸಿ ಜಾರಿ ವಿರೋಧಿಸಿ ಮಾತನಾಡಿದ ಅವರು, ಜನರು ಕಣ್ಣು ಮುಚ್ಚಿಕೊಂಡು ಹುಚ್ಚೆದ್ದು ಮೋದಿಯನ್ನು ನಂಬಿದರು. ಈ ನಂಬಿಕೆಗೆ ನಾವು ತೆತ್ತ ಬೆಲೆ ಎಷ್ಟು? ದೇಶ ಇದನ್ನು ಲೆಕ್ಕ ಹಾಕಬೇಕಾಗಿದೆ. ಮೋದಿಯವರು ನಂಬಿಸಿದ್ದು, ಜನರು ನಂಬಿದ್ದು ಒಂದಾ ಎರಡಾ? ವಿದೇಶದಲ್ಲಿ ಇಟ್ಟಿರುವ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ಹಾಕುತ್ತೇನೆ ಅಂದರು. ಜನ ನಂಬಿದರು. ಇನ್ನೂ ನಂಬಿಕೊಂಡು ಕಾಯುತ್ತಿರುವವರು ಇರಬಹುದು. ಆದರೆ ಜನರು ತಾವು ಬ್ಯಾಂಕಿನಲ್ಲಿ ಇಟ್ಟ ಹಣಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಹೇಳಿದರು.

ಪೌರತ್ವ ತಿದ್ದುಪಡಿಯನ್ನು ಕಾಯ್ದೆ ಮಾಡಿದ ಮೇಲೆ ಆತಂಕಗೊಂಡ ಜನ ಸಮುದಾಯವನ್ನು ಉದ್ದೇಶಿಸಿ ನಮ್ಮ ಪ್ರಧಾನಿಯವರು “ಆತಂಕಕ್ಕೆ ಒಳಗಾಗಬೇಡಿ, ನನ್ನನ್ನು ನಂಬಿ, ನಾನು ನಿಮ್ಮ ಸೇವಕ” ಅಂತ ಟ್ವೀಟ್ ಮಾಡಿದ್ದಾರೆ. ಇದನ್ನು ನೋಡಿದಾಗ ಪ್ರಧಾನಿ ಮೋದಿಯವರ ಮಾತಿಗೂ ಕನ್ನಡದ ಸೀರಿಯಲ್ 'ಸಿಲ್ಲಿ ಲಲ್ಲಿ'ಯ ಸಮಾಜ ಸೇವಕಿ ಲಲಿತಾಂಬ ಮಾತಿಗೂ ತಾಳಮೇಳ ಆಗುತ್ತಿದೆಯಲ್ಲಾ ಅನ್ನಿಸಿಬಿಟ್ಟಿತು ಎಂದು ವ್ಯಂಗ್ಯವಾಡಿದರು.

ನಿರುದ್ಯೋಗ ಕಳೆದ 45 ವರ್ಷಗಳಲ್ಲಿ ಹೆಚ್ಚು ನಷ್ಟವಾಗಿವೆ. ಹೀಗೇನೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಅಂದರು. ಆದರೆ ರೈತರ ಸಂಕಷ್ಟ ದುಪ್ಪಟ್ಟು ಆಗುತ್ತಿದೆ. ನೋಟು ಬ್ಯಾನ್‍ನಿಂದಾದ ಅನಾಹುತಗಳು ಭಾರತವನ್ನು ಇನ್ನೂ ಸುಡುತ್ತಿದೆ. ಪ್ರಧಾನಿ ಮೋದಿಯವರ ವಚನಗಳಿಗೆ ಇನ್ನೇನು ಮೂರು ವರ್ಷಗಳು ತುಂಬಿದೆ. ಎಲ್ಲವೂ ಮಹಾಭಾರತದ ಉತ್ತರನ ಪೌರುಷದಂತೆ ಕಂಡುಬರುತ್ತಿದೆ. ಇಲ್ಲಿ ನಂಬಿದವರ ತಪ್ಪೋ, ನಂಬಿಸಿದವರ ತಪ್ಪೋ ತಿಳಿಯದಾಗಿದೆ. ಜನ ಜಾತಿ, ಧರ್ಮ, ಭಾಷೆ ಇತ್ಯಾದಿ ನಂಬಿಕೆಗಳನ್ನು ಕೆರಳಿಸಿ ಬೆಂಕಿ ಹಚ್ಚಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಈಗ ಜನಮುಖಿ ಸಂಘಟನೆಗಳು, ವಿರೋಧ ಪಕ್ಷಗಳು ಮಾತ್ರವಲ್ಲ ಆರೆಸ್ಸೆಸ್- ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಲ್ಲಿ ಇರುವ ಮುಗ್ಧರು, ಅಷ್ಟೇ ಯಾಕೆ ಜನಸಮುದಾಯ ಸೇರಿದಂತೆ ದೇಶವೂ ಮಾತಾಡಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ದೇವನೂರ ಮಹಾದೇವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜವಾದಿ ಪ.ಮಲ್ಲೇಶ್, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸ್ವರಾಜ್ ಇಂಡಿಯಾದ ಶಬ್ಬೀರ್ ಮುಸ್ತಾಫ, ಅಭಿರುಚಿ ಗಣೇಶ್, ಸಿಪಿಐನ ಜಗದೀಶ್ ಸೂರ್ಯ, ಎಸ್‍ಯುಸಿಐನ ಉಮಾದೇವಿ, ಪಿಯುಸಿಎಲ್‍ನ ಪ್ರೊ. ಪಂಡಿತಾರಾಧ್ಯ, ದಸಂಸದ ಆಲಗೂಡು ಶಿವಕುಮಾರ್, ಸ್ವರಾಜ್ ಇಂಡಿಯಾದ ವಕೀಲ ಪುನೀತ್, ಸಿಪಿಎಂನ ಲ. ಜಗನ್ನಾಥ್ ಸೇರಿದಂತೆ  ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X