ಕಲ್ಲು ಹೊಡೆಯಲು ಬಂದರೆ ರಿವಾಲ್ವರ್ ಇಟ್ಟುಕೊಂಡು ಪೂಜೆ ಮಾಡ್ತೀರಾ: ಕೇಂದ್ರ ಸಚಿವ ಸುರೇಶ್ ಅಂಗಡಿ
ಬೆಳಗಾವಿ, ಡಿ. 20: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಪ್ರತಿಭಟನೆಗೆ ಪ್ರಚೋದನೆ ನೀಡುತ್ತಿದ್ದು, ಸಾರ್ವಜನಿಕರ ಆಸ್ತಿಗೆ ಹಾನಿ ಮಾಡಿದರೆ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ‘ನಿಮ್ಮ ಮನೆಗೆ ಯಾರಾದರೂ ಕಲ್ಲು ಹೊಡೆಯಲು ಬಂದರೆ ನೀವು ರಿವಾಲ್ವರ್ ಇಟ್ಟುಕೊಂಡು ಪೂಜೆ ಮಾಡ್ತೀರಾ’ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ಗೆ ಇಬ್ಬರು ಬಲಿಯಾಗಿದ್ದು, ಇದಕ್ಕೆ ವಿಪಕ್ಷ ನಾಯಕರೆ ಕಾರಣ ಎಂದು ಇದೇ ವೇಳೆ ಆರೋಪಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ದೇಶದ ನಿವಾಸಿಗಳಿಗೆ ಯಾವುದೇ ಸಮಸ್ಯೆಯಿಲ್ಲ. ಪ್ರಚೋದನೆಗೆ ಒಳಗಾಗಿ ಸರಕಾರದ ಆಸ್ತಿ ಹಾನಿ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು. ಹಾನಿ ಮಾಡಿದರೆ ರಾಜ್ಯ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.
Next Story