ರೆಹಾನ್ ಅಹಮದ್ಗೆ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಮಂಡ್ಯ, ಡಿ.25: ಇತ್ತೀಚೆಗೆ ಆದಿಚುಂಚನಗಿರಿ ಮಠದಲ್ಲಿ ನಡೆದ 27ನೇ ರಾಜ್ಯಮಟ್ಟದ ಬಾಲ ವಿಜ್ಞಾನ ಸಮಾವೇಶದಲ್ಲಿ ಕೆ.ಆರ್.ಪೇಟೆ ತಾಲೂಕು ಆದಿಹಳ್ಳಿ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ರೆಹಾನ್ ಅಹಮದ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾನೆ.
ಕೆ.ಆರ್.ಪೇಟೆ ಪಟ್ಟಣದ ಮುಸ್ಲಿಂ ಬ್ಲಾಕ್ ನಲ್ಲಿ ವಾಸವಾಗಿರುವ ರಫೀಕ್ ಅಹಮದ್ ಮತ್ತು ಮಾಹೇ ಜಮೀನ್ ಅವರ ಪುತ್ರನಾಗಿರುವ ರೆಹಾನ್, ಅಸ್ಸಾಂನಲ್ಲಿ ನಡೆದ ರಾಷ್ಟ್ರಮಟ್ಟದ ವಿಜ್ಞಾನ ಸಮಾವೇಶದಲ್ಲಿಯೂ ಸಹ 2ನೇ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾನೆ. ಪುರಸಭೆ ಸದಸ್ಯ ಎಚ್.ಆರ್.ಲೋಕೇಶ್ ರೆಹಾನ್ ಅವರನ್ನು ಅಭಿನಂದಿಸಿದ್ದಾರೆ.
Next Story