ಸಾಲಬಾಧೆ: ರೈತ ಆತ್ಮಹತ್ಯೆ
ಕಲಬುರಗಿ, ಡಿ.26: ಜೇವರ್ಗಿ ತಾಲೂಕಿನ ರೇವನೂರ ಗ್ರಾಮದ ರೈತ ಕಡ್ಲೆಪ್ಪ ತನ್ನ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ರೈತ ಬ್ಯಾಂಕಿನಲ್ಲಿ ಮತ್ತು ಖಾಸಗಿ ಲೇವಾದೇವಿದಾರರಲ್ಲಿ 8 ಲಕ್ಷ ರೂ.ಸಾಲ ಮಾಡಿದ್ದು, ತೀರಿಸಲಾಗದೆ ವಿಷ ಸೇವಿಸಿ ಸಾವನ್ನಪ್ಪಿದ್ದಾನೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇವರಿಗೆ ಮೂರು ಹೆಣ್ಣು, ಇಬ್ಬರು ಗಂಡು ಮಕ್ಕಳಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story